ಪತ್ರಿಕಾ ಪ್ರಕಟಣೆ
ಶ್ರೀರಂಗಪಟ್ಟಣ ಗ್ರಮಾಂತರ ಪೊಲೀಸ್ ಠಾಣೆ ಮತ್ತು ಅರಕೆರೆ ಪೊಲೀಸ್ ಠಾಣೆರವರ ಕಾರ್ಯಾಚರಣೆ.
ಮೋಸಮಾಡಿ ಚಿನ್ನಾಭರಣಗಳನ್ನು ಕಳ್ಳತನ ಮಾಡುವಂತಹ ಆರೋಪಿಗಳನ್ನು ಬಂಧಿಸಿ ಒಟ್ಟು 11 ಪ್ರಕರಣಗಳನ್ನು ಭೇದಿಸಿ 492 ಗ್ರಾಂ ಚಿನ್ನ ಮತ್ತು 20 ಗ್ರಾಂ ಬೆಳ್ಳಿಯನ್ನು ವಶಪಡಿಸಿಕೊಂಡಿರುತ್ತಾರೆ. ಒಟ್ಟು ಮೌಲ್ಯ 15.50 ಲಕ್ಷ ರೂಗಳಾಗಿರುತ್ತದೆ
ಅರಕೆರೆ ಪೊಲೀಸ್ ಠಾಣೆ ಹಾಗು ವಿವಿಧ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದ್ದ ಬೈಕ್ ಕಳ್ಳತನದ ಪ್ರಕರಣಗಳನ್ನು ಭೇದಿಸಿ ಆರೊಪಿಯನ್ನು ಬಂಧಿಸಿ ಒಟ್ಟು 11 ಬೈಕ್ಗಳನ್ನು ವಶಪಡಿಸಿಕೊಂಡಿದ್ದು ಅಂದಾಜು ಮೌಲ್ಯ 4 ಲಕ್ಷ ರೂಗಳಾಗಿರುತ್ತದೆ.
ಮಂಡ್ಯ ಜಿಲ್ಲಾ ಪೊಲೀಸ್ ವತಿಯಿಂದ ಅಪರಾಧ ತಡೆ ಮಾಸಾಚರಣೆ -2017 ಅಂಗವಾಗಿ ಶಾಲಾ ಕಾಲೇಜು ವಿಧ್ಯಾರ್ಥಿಗಳಿಗೆ ಅಪರಾಧ ತಡೆ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಅಪರಾಧ ತಡೆಗೆ ಸಂಬಂಧಿಸಿದ ಸೂಚನಾ ಫಲಕಗಳನ್ನು ಒಳಗೊಂಡ ಶಾಲಾಮಕ್ಕಳ ಜಾಥಾವನ್ನು ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿರವರಾದ ಶ್ರೀಮತಿ ರಾಧಿಕಾ.ಜಿ, ಐಪಿಎಸ್ ರವರು ಉದ್ಘಾಟಿಸಿದರು ಹಾಗು ಮಂಡ್ಯ ನಗರದ ಕಲಾ ಮಂದಿರದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು.

























