Moving text

Mandya District Police
Showing posts with label Events. Show all posts
Showing posts with label Events. Show all posts

ಕರ್ನಾಟಕ ವಿಧಾನಸಭಾ ಚುನಾವಣೆಯ ಸಂಬಂಧ ಜಿಲ್ಲಾ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ಪೊಲೀಸ್ ಅಧಿಕಾರಿಗಳು ಹಾಗೂ ವಿವಿಧ ಸೇನಾ ಪಡೆ ರವರಿಂದ ಮಂಡ್ಯ ನಗರ, ಮದ್ದೂರು, ಅರಕೆರೆ ಹಾಗೂ ಇತರೆ ಕಡೆಗಳಲ್ಲಿ ಪಥ ಸಂಚಲನ ನಡೆಸಲಾಯಿತು.










ಕರ್ನಾಟಕ ವಿಧಾನಸಭಾ ಚುನಾವಣೆಯ ಸಂಬಂಧ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ಕೇಂದ್ರೀಯ ಸಶಸ್ತ್ರ ಸೀಮಾ ಬಲ [SSB] ರವರಿಂದ ದಿನಾಂಕ: 07-04-2018 ರಂದು ಮಳವಳ್ಳಿ ಟೌನ್ ನಲ್ಲಿ ಪಥ ಸಂಚಲನ ನಡೆಸಲಾಯಿತು.




ದಿನಾಂಕ: 18-02-2018 ರಂದು ಮಂಡ್ಯ ಜಿಲ್ಲಾ ಪೊಲೀಸ್ ವತಿಯಿಂದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಡ್ಯ ಜಿಲ್ಲೆಯ ಪೊಲೀಸ್ ಅಧಿಕಾರಿಗಳು, ತನಿಖಾ ಸಹಾಯಕ ಸಿಬ್ಬಂದಿಗಳು, ಅಬಕಾರಿ ಇಲಾಖೆಯ ಅಧಿಕಾರಿಗಳು ಮತ್ತು ತಹಸೀಲ್ದಾರ್ ರವರಿಗೆ ಚುನಾವಣಾ ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಹಾಗೂ ಕಲಂ-107 ರಿಂದ 110 ಸಿ.ಆರ್.ಪಿ.ಸಿ ಅಡಿಯಲ್ಲಿ ಕಾರ್ಯನಿರ್ವಾಹಕ ದಂಡಾಧಿಕಾರಿಗಳು ಕೈಗೊಳ್ಳಬೇಕಾದ ವ್ಯವಹರಣೆಗಳಿಗೆ ಸಂಬಂಧಿಸಿದಂತೆ ಗದಗ ಜಿಲ್ಲಾ ಪೊಲೀಸ್ ಕಛೇರಿಯ ಕಾನೂನು ಅಧಿಕಾರಿಗಳಾದ ಶ್ರೀ ಮಹೇಶ್ ವಿ. ವೈದ್ಯ ರವರಿಂದ ಕಾರ್ಯಗಾರ ನಡೆಸಲಾಯಿತು.










ದಿನಾಂಕ:11-02-2018 ರಂದು ಮಂಡ್ಯ ಜಿಲ್ಲಾ ಪೊಲೀಸ್ ವತಿಯಿಂದ ಮಂಡ್ಯ ಜಿಲ್ಲಾ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ರವರಿಗೆ “ನಿಮ್ಮ ಆರೋಗ್ಯ ನಿಮ್ಮ ಕೈಯಲ್ಲಿ-ಆರೋಗ್ಯ ಅರಿವು ಕಾರ್ಯಕ್ರಮ”  ವಿಷಯಕ್ಕೆ ಕುರಿತಂತೆ ಡಾ|| ಖಾದರ್ ರವರಿಂದ ಉಪನ್ಯಾಸ ಕಾರ್ಯಾಗಾರವನ್ನು ಏರ್ಪಡಿಸಲಾಯಿತು. 


ದಿನಾಂಕ: 09-02-2018 ರಂದು ಮಂಡ್ಯ ಜಿಲ್ಲಾ ಪೊಲೀಸ್ ಕಛೇರಿಯ ಸಭಾಂಗಣದಲ್ಲಿ ಚುನಾವಣಾ ಪ್ರಕರಣಗಳಿಗೆ ಸಂಬಂಧಿಸಿದಂತೆ ಶ್ರೀ ಕುಣಿಗಲ್ ಶ್ರೀಕಂಠ, ಐಪಿಎಸ್ (ನಿ) ರವರಿಂದ ಪೊಲೀಸ್ ಅಧಿಕಾರಿಗಳು ಮತ್ತು ತನಿಖಾ ಸಹಾಯಕ ಸಿಬ್ಬಂದಿಯವರಿಗೆ ಕಾರ್ಯಗಾರವನ್ನು ಏರ್ಪಡಿಸಲಾಯಿತು. 




ದಿನಾಂಕ: 30-12-2017 ರಂದು ಅಪರಾಧ ತಡೆ ಮಾಸಾಚರಣೆ ಅಂಗವಾಗಿ ಅಪರ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀಮತಿ ಲಾವಣ್ಯ ಬಿ.ಎನ್. ರವರ ನೇತೃತ್ವದಲ್ಲಿ ಮಂಡ್ಯ ನಗರದಲ್ಲಿ ಬೈಕ್ ರಾ ್ಯಲಿ ಯನ್ನು ಹಮ್ಮಿಕೊಳ್ಳಲಾಯಿತು. ಹಾಗೂ ಸಾರ್ವಜನಿಕರಿಗೆ ಅಪರಾಧ ತಡೆಗೆ ಸಂಬಂಧಿಸಿದ ಕರ ಪತ್ರಗಳನ್ನು ಹಂಚಲಾಯಿತು.




ಅಪರಾಧ ತಡೆ ಮಾಸಾಚರಣೆ ಅಂಗವಾಗಿ ಜಿಲ್ಲಾ ಪೊಲೀಸ್ ವತಿಯಿಂದ ಬೀದಿ ನಾಟಕವನ್ನು ಆಯೋಜಿಸಲಾಯಿತು.



ದಿನಾಂಕ:21-12-2017 ರಂದು ಜಿಲ್ಲಾ ಪೊಲೀಸ್ ಕಛೇರಿಯ ಸಭಾಂಗಣದಲ್ಲಿ “ಸೈಬರ್ ಕ್ರೈಂ” ವಿಷಯದ ಬಗ್ಗೆ ಜಿಲ್ಲೆಯ ಪೊಲೀಸ್ ಅಧಿಕಾರಿ ಹಾಗು ಪೊಲೀಸ್ ಠಾಣೆಯ ತನಿಖಾ ಸಿಬ್ಬಂಧಿರವರಿಗೆ ಕಾರ್ಯಾಗಾರವನ್ನು ಏರ್ಪಡಿಸಲಾಯಿತು. 







ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆ ವತಿಯಿಂದ ಅಪರಾಧ ತಡೆ ಮಾಸಾಚರಣೆ -2017 ಅಂಗವಾಗಿ ಶಾಲಾ ಮಕ್ಕಳಿಗೆ ಅಪರಾಧ ತಡೆ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಹಾಗು ಅಪರಾಧ ತಡೆಗೆ ಸಂಬಂಧಿಸಿದ ಫಲಕಗಳನ್ನು ಬಿತ್ತರಿಸಲಾಯಿತು. 


ಮಂಡ್ಯ ಜಿಲ್ಲಾ ಪೊಲೀಸ್ ವತಿಯಿಂದ ಅಪರಾಧ ತಡೆ ಮಾಸಾಚರಣೆ -2017 ಅಂಗವಾಗಿ ಶಾಲಾ ಕಾಲೇಜು ವಿಧ್ಯಾರ್ಥಿಗಳಿಗೆ ಅಪರಾಧ ತಡೆ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಅಪರಾಧ ತಡೆಗೆ ಸಂಬಂಧಿಸಿದ ಸೂಚನಾ ಫಲಕಗಳನ್ನು ಒಳಗೊಂಡ ಶಾಲಾಮಕ್ಕಳ ಜಾಥಾವನ್ನು ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿರವರಾದ ಶ್ರೀಮತಿ ರಾಧಿಕಾ.ಜಿ, ಐಪಿಎಸ್ ರವರು ಉದ್ಘಾಟಿಸಿದರು ಹಾಗು ಮಂಡ್ಯ ನಗರದ ಕಲಾ ಮಂದಿರದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು.






ಮಂಡ್ಯ ಜಿಲ್ಲಾ ಪೊಲೀಸ್ ವಾರ್ಷಿಕ ಪೊಲೀಸ್ ಕ್ರೀಡಾ ಕೂಟ -2017 ಅನ್ನು ದಿನಾಂಕ:15-12-2017 ರಂದು ಉದ್ಘಾಟಿಸಲಾಯಿತು.