“ಗೂಂಡಾ ಕಾಯ್ದೆ” ಹಾಗು “ಗಡಿಪಾರು” ವಿಷಯಗಳ ಬಗ್ಗೆ ದಿನಾಂಕ:30-10-2017 ರಂದು ಮಂಡ್ಯ ಜಿಲ್ಲೆಯ ಪೊಲೀಸ್ ಅಧಿಕಾರಿ ಹಾಗು ಸಿಬ್ಬಂಧಿರವರಿಗೆ ಒಂದು ದಿನದ ಕಾರ್ಯಾಗಾರವನ್ನು ಏರ್ಪಡಿಸಲಾಯಿತು.
Moving text
Safety Awareness Meetings held by Mandya District Police
Safety Awareness Meetings held by our Police Officers with Bank Managers, Temple Priests, Jewelry Shop Owners, Mosque committee members. Safety tips have been given to all like installation of CCTV Cameras, Safety Alarms & Safety Locks etc..
Safety Awareness Meetings held by Mandya District Police
Safety Awareness Meetings held by Mandya District Police
Safety Awareness meetings were held by Mandya District Police with Jewellery Shop owners, Temple Priests, School Administrators, Petrol Station owners, Restaurants owners, Choultry owners and given safety tips like installation of CCTV, Safety Alarms, Safety Locks etc..
House breaking theft case detection -Mandya Central PS Press Note
ಮಂಡ್ಯ ಜಿಲ್ಲಾ ಪೊಲೀಸ್
ಪತ್ರಿಕಾ ಪ್ರಕಟಣೆ.
16-10-2017
ದಿನಾಂಕ:17-09-2017 ರಂದು ಮಂಡ್ಯ ಸೆಂಟ್ರಲ್ ಪೊಲೀಸ್ ಠಾಣಾ ಸರಹದ್ದಿನ ಷುಗರ್ ಟೌನ್ ನ ಮರಿಸ್ವಾಮಿ ಎಂಬುವರು ತನ್ನ ಮನೆಗೆ ರಾತ್ರಿ 09-00 ಗಂಟೆಗೆ ಬೀಗ ಹಾಕಿಕೊಂಡು ಷುಗರ್ ಫ್ಯಾಕ್ಟರಿಗೆ ಸೆಕ್ಯೂರಿಟಿ ಕೆಲಸಕ್ಕೆ ಹೋಗಿದ್ದಾಗ ಯಾರೋ ಕಳ್ಳರು ರಾತ್ರಿ ವೇಳೆಯಲ್ಲಿ ಮನೆಗೆ ಹಾಕಿದ್ದ ಬೀಗವನ್ನು ಯಾವುದೋ ಆಯುಧದಿಂದ ಮಿಟಿ ಮನೆಯೊಳಗಡೆ ಪ್ರವೇಶ ಮಾಡಿ ಮನೆಯ ಬೀರುವಿನಲ್ಲಿಟ್ಟಿದ್ದ 28 ಗ್ರಾಂ ಚಿನ್ನದ ಚೈನು, 8 ಗ್ರಾಂ ಉಂಗುರ , ಒಂದು ವಾಚ್, 8 ಸಾವಿರ ರೂ ನಗದು ಹಣವನ್ನು ಕಳ್ಳತನ ಮಾಡಿಕೊಂಡು ಹೋಗಿದ್ದು ಕಳ್ಳತನ ಮಾಡಿಕೊಂಡು ಹೋಗಿರುವ ಕಳ್ಳರನ್ನು ಪತ್ತೆ ಹಚ್ಚಿ ಕಾನೂನು ರೀತಿ ಕ್ರಮ ಜರುಗಿಸಬೇಕೆಂದು ಕೊಟ್ಟ ದೂರನ್ನು ಸ್ವೀಕರಿಸಿಕೊಂಡು ಠಾಣಾ ಮೊ.ನಂ:110/2017 ಕಲಂ:457-380 ಐಪಿಸಿ ರೀತ್ಯಾ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿರುತ್ತದೆ.
ಮೇಲ್ಕಂಡ ಪ್ರಕರಣಗಳಲ್ಲಿ ಆರೋಪಿಗಳ ಪತ್ತೆಯ ಬಗ್ಗೆ ಅಪರಾಧ ಸಿಬ್ಬಂದಿಯರುಗಳಾದ ಸಿಪಿಸಿ-656, 114 ರವರುಗಳನ್ನು ನೇಮಿಸಿದ್ದು ಸದರಿಯವರು ಆರೋಪಿಗಳ ಪತ್ತೆಯ ಬಗ್ಗೆ ಮಂಡ್ಯ ನಗರದ ರೈಲ್ವೆ ನಿಲ್ದಾಣ, ಷುಗರ್ ಟೌನ್, ಅಸಿಟೆಟ್ಟೌನ್, ಪೇಟೆ ಬೀದಿ ಕಡೆಗಳಲ್ಲಿ ಗಸ್ತು ಮಾಡಿಕೊಂಡು ಪೇಟೆ ಬೀದಿಯ ನಕ್ಷತ್ರ ಗೋಲ್ಡ್ ಗಿರವಿ ಅಂಗಡಿಯ ಮುಂಭಾಗದಲ್ಲಿ ಅನುಮಾನದಿಂದ ಓಡಾಡುತ್ತಿದ್ದ, ಈ ಕೆಳಕಂಡ ಆರೋಪಿಗಳಾದ
1] ತಿಪ್ಪೇಶ @ ಯುವರಾಜ @ ಕೆಪ್ಪತಿಪ್ಪ ಬಿನ್ ಕುರುಡ ತಿಪ್ಪಣ್ಣ @ ಕುರುಡತಿಪ್ಪ, 34 ವರ್ಷ, ಕೊರಚರು ಜನಾಂಗ, ವ್ಯವಸಾಯ, ಚಿಕ್ಕಹಬ್ಬಿಗೆರೆ ಗ್ರಾಮ, ಸಂತೆಬನ್ನೂರು ಹೋಬಳಿ, ಚೆನ್ನಗಿರಿ ತಾ: ದಾವಣಗೆರೆ ಜಿಲ್ಲೆ. ಎಂತಲೂ ಮತ್ತೊಬ್ಬನ ಹೆಸರು ವಿಳಾಸ ಕೇಳಲಾಗಿ
2] ಸೈಯ್ಯದ ಬಾಷಾ @ ಭಾಷ ಬಿನ್ ಸೈಯ್ಯದ್ ಹುಸೇನ್ ಸಾಬ್, 28ವರ್ಷ, ಮುಸ್ಲಿಂ ಜನಾಂಗ, ಟೈಲರ್ ಕೆಲಸ ಕೆಂಪನಹಳ್ಳಿ ಚಿಕ್ಕನಾಯಕನಹಳ್ಳಿ ತಾ: ತುಮಕೂರು ಜಿಲ್ಲೆ ಎಂಬುವರನ್ನು ವಶಕ್ಕೆ ತೆಗೆದುಕೊಂಡು ಠಾಣೆಗೆ ಹಾಜರ್ ಪಡಿಸಿದ ಮೇರೆಗೆ, ಸದರಿ ಆರೋಪಿಗಳನ್ನು ಕೂಲಂಕಷವಾಗಿ ವಿಚಾರ ಮಾಡಲಾಗಿ, ಸದರಿ ಮೇಲ್ಕಂಡ ಆರೋಪಿಗಳು ನೀಡಿದ ಮಾಹಿತಿ ಮೇರೆಗೆ 1] ಮಂಡ್ಯ ಸೆಂಟ್ರಲ್ ಪೊಲೀಸ್ ಠಾಣೆ 2] ಕೆರಗೋಡು ಪೊಲೀಸ್ ಠಾಣೆ 3] ಶಿವಳ್ಳಿ ಪೊಲೀಸ್ ಠಾಣೆ 4] ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಕಳ್ಳತನ ಮಾಡಿ ಈ ಕೆಳಕಂಡಂತೆ ಪ್ರಕರಣಗಳು ಪತ್ತೆಯಾಗಿರುತ್ತವೆ.
1] ಮಂಡ್ಯ ಸೆಂಟ್ರಲ್ ಠಾಣೆ ಮೊ.ಸಂ 77/2017 ಕಲಂ 457-380 ಐಪಿಸಿ
2] ಮಂಡ್ಯ ಸೆಂಟ್ರಲ್ ಠಾಣೆ ಮೊ.ಸಂ 110/2017 ಕಲಂ 457-380 ಐಪಿಸಿ
3] ಕೆರೆಗೋಡು ಪೊಲೀಸ್ ಠಾಣೆಯ ಮೊ.ಸಂ 39/2017 ಕಲಂ 457-380 ಐಪಿಸಿ
4] ಕೆರೆಗೋಡು ಪೊಲೀಸ್ ಠಾಣೆಯ ಮೊ.ಸಂ 40/2017 ಕಲಂ 457-380 ಐಪಿಸಿ
5] ಕೆರೆಗೋಡು ಪೊಲೀಸ್ ಠಾಣೆಯ ಮೊ.ಸಂ 41/2017 ಕಲಂ 457-380 ಐಪಿಸಿ
6] ಕೆರೆಗೋಡು ಪೊಲೀಸ್ ಠಾಣೆಯ ಮೊ.ಸಂ 42/2017 ಕಲಂ 457-380 ಐಪಿಸಿ
7] ಕೆರೆಗೋಡು ಪೊಲೀಸ್ ಠಾಣೆಯ ಮೊ.ಸಂ 43/2017 ಕಲಂ 457-380 ಐಪಿಸಿ
8] ಕೆರೆಗೋಡು ಪೊಲೀಸ್ ಠಾಣೆಯ ಮೊ.ಸಂ 44/2017 ಕಲಂ 457-380 ಐಪಿಸಿ
9] ಮಂಡ್ಯ [ಗ್ರಾಂ] ಪೊಲೀಸ್ ಠಾಣೆಯ ಮೊ.ಸಂ85/2017 ಕಲಂ 457-380 ಐಪಿಸಿ
10] ಮಂಡ್ಯ [ಗ್ರಾಂ] ಪೊಲೀಸ್ ಠಾಣೆಯ ಮೊ.ಸಂ90/2017 ಕಲಂ 457-380 ಐಪಿಸಿ
11] ಶಿವಳ್ಳಿ ಪೊಲೀಸ್ ಠಾಣೆಯ ಮೊ.ಸಂ172/2016 ಕಲಂ 457-380 ಐಪಿಸಿ
12] ಶಿವಳ್ಳಿ ಪೊಲೀಸ್ ಠಾಣೆಯ ಮೊ.ಸಂ174/2016 ಕಲಂ 457-380 ಐಪಿಸಿ
13] ಶಿವಳ್ಳಿ ಪೊಲೀಸ್ ಠಾಣೆಯ ಮೊ.ಸಂ175/2016 ಕಲಂ 457-380 ಐಪಿಸಿ
ಮೇಲ್ಕಂಡ 13 ಪ್ರಕರಣಗಳಲ್ಲಿ ಆರೋಪಿಗಳಿಂದ ಒಟ್ಟು 230 ಗ್ರಾಂ ಚಿನ್ನದ ಆಭರಣಗಳು ಮತ್ತು 1 ಕೆ.ಜಿ ಬೆಳ್ಳಿ ಪದಾರ್ಥಗಳನ್ನು ವಶಪಡಿಸಿಕೊಂಡಿದ್ದು ಇವುಗಳ ಒಟ್ಟು ಮೌಲ್ಯ ಸುಮಾರು 7,00000/- ರೂಗಳಾಗಿರುತ್ತದೆ
ಇವರು ಕುಖ್ಯಾತ ಕಳ್ಳತನ ಮಾಡುವ ಕಳ್ಳರಾಗಿದ್ದು,ದಾವಣಗೆರೆ, ಚಿತ್ರದುರ್ಗ,ತುಮಕೂರು,ಕಾರವಾರ, ಶಿವಮೊಗ್ಗ ಜಿಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಕಳ್ಳತನ ಮಾಡಿ ಇವರುಗಳ ಇರುದ್ಧ ಪ್ರಕರಣಗಳು ದಾಖಲಾಗಿ ವಿಚಾರಣೆಯಲ್ಲಿರುತ್ತವೆ.
ಈ ಪ್ರಕರಣಗಳನ್ನು ಶ್ರೀಮತಿ ಜಿ.ರಾಧಿಕಾ ಐ.ಪಿ.ಎಸ್, ಜಿಲ್ಲಾ ವರಿಷ್ಠಾಧಿಕಾರಿ,ಮಂಡ್ಯ ಜಿಲ್ಲೆ, ಶ್ರೀಮತಿ.ಲಾವಣ್ಯ ಕೆ.ಎಸ್.ಪಿ.ಎಸ್,ಅಪರ ಜಿಲ್ಲಾ ವರಿಷ್ಠಾಧಿಕಾರಿ, ಮಂಡ್ಯ ಜಿಲ್ಲೆ ಹಾಗೂ ಶ್ರೀ.ಎನ್.ಎಸ್ ಚಂದ್ರಶೇಖರ್ ಕೆ.ಎಸ್.ಪಿ.ಎಸ್, ಡಿವೈ.ಎಸ್.ಪಿ, ಮಂಡ್ಯ ಉಪ-ವಿಭಾಗ, ಮಂಡ್ಯ ರವರ ಮಾರ್ಗದರ್ಶನದಲ್ಲಿ ಸಿಪಿಐ ಶ್ರೀ.ಕೆ.ಸಂತೋಷ್, ಮಂಡ್ಯ ನಗರ ವೃತ್ತ ರವರ ನೇತೃತ್ವದಲ್ಲಿ ಶ್ರೀ ಆನಂದಕುಮಾರ್.ಹೆಚ್ ಪಿಎಸ್ಐ ಮಂಡ್ಯ ಸೆಂಟ್ರಲ್ ಪೊಲೀಸ್ ಠಾಣೆ ಹಾಗೂ ಸಿಬ್ಬಂದಿಯವರುಗಳಾದ ಎಎಸ್ಐ ಸಿದ್ದರಾಜು, ಎಎಸ್ಐ ಪುಟ್ಟಸ್ವಾಮಿ,ಸಿಹೆಚ್.ಸಿ-23 ಮೃತ್ಯುಂಜಯಸ್ವಾಮಿ ಎಸ್.ಪಿ, ಸಿಹೆಚ್.ಸಿ-56 ಚಿಕ್ಕಯ್ಯ, ಸಿಹೆಚ್.ಸಿ-158 ಎನ್.ನಾರಾಯಣ, ಹೆಚ್.ಸಿ 147 ಸುಂದರ್ ರಾಜು ಹೆಚ್.ಸಿ 210 ಶ್ರೀನಿವಾಸ್, ಹೆಚ್.ಸಿ 228 ಮಂಜುನಾಥ ಎಂ.ಪಿ, ಸಿಹೆಚ್ಸಿ 108 ಸತೀಶ್, ಸಿಪಿಸಿ-114 ಮಂಜುನಾಥ, ಪಿಸಿ-160 ಸಚ್ಚಿನ್, ಪಿಸಿ 170 ಮಹೇಶ್ ಕುಮಾರ್,ಸಿಪಿಸಿ-322 ಅಕ್ಬರ್ ಎಸ್.ಬಂದುಗೋಳ, ಸಿಪಿಸಿ-363 ಶ್ರೀನಿವಾಸ, ಸಿಪಿಸಿ-409 ಸೈಯದ್ ಗೌಸ್, ಸಿಪಿಸಿ 656 ಮಂಜುನಾಥ ಕೆ.ಬಿ, ಸಿಪಿಸಿ 330 ಶ್ರೀಕಾಂತ, ಮಪಿಸಿ-612 ಸುಕನ್ಯ .ಎಸ್, ಮಪಿಸಿ 739 ಶ್ರೀಮತಿ ರತ್ನಮ್ಮ ಬಿ.ಕೆ ಮತ್ತು ಎಹೆಚ್.ಸಿ-29 ಕಾಂತರಾಜು, ಎ.ಪಿ.ಸಿ-159 ಸಿದ್ದೇಗೌಡ,ಸಿಪಿಸಿ-280 ರವಿಕಿರಣ ಸಿಪಿಸಿ-105 ಲೋಕೇಶ್ ಮತ್ತು ಬೆರಳಚ್ಚು ತಜ್ಞರಾದ ರಾಜೇಂದ್ರ ರವರ ಕಾರ್ಯಚರಣೆ ನಡೆಸಿ ಆರೋಪಿಗಳನ್ನು ದಸ್ತಗಿರಿ ಮಾಡಿ ಘನ ನ್ಯಾಯಾಲಯದ ಬಂಧನಕ್ಕೆ ಒಳಪಡಿಸಿರುತ್ತೆ.
ಪತ್ರಿಕಾ ಪ್ರಕಟಣೆ
2017ನೇ ಸಾಲಿನ ಮೈಸೂರು ದಸರಾ
ಮಹೋತ್ಸವದ ಸಂಬಂಧ ಸಮೂಹ ವಾದ್ಯ ವೃಂದದ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ಮಂಡ್ಯ ಜಿಲ್ಲೆಯ
ಪೊಲೀಸ್ ವಾದ್ಯ ವೃಂದದ ತಂಡವನ್ನು ಮೈಸೂರಿಗೆ ನಿಯೋಜಿಸಿ ಕಳುಹಿಸಲಾಗಿದ್ದು, ದಿ:19-09-2017 ರಂದು ನಡೆದ ಸಮೂಹ
ವಾದ್ಯ-ವೃಂದ ಸ್ವರ್ಧೆಯಲ್ಲಿ ಮಂಡ್ಯ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ವಾದ್ಯ-ವೃಂದದ ತಂಡವು ಪೈಪ್
ಬ್ಯಾಂಡ್ ನುಡಿಸಿ, ರಾಜ್ಯಕ್ಕೆ
ದ್ವಿತೀಯ ಸ್ಥಾನವನ್ನು ಪಡೆದುದರಿಂದ ಮಾನ್ಯ ಐ.ಜಿ. & ಡಿ.ಜಿ.ಪಿ ಸಾಹೇಬರವರು
ಸ್ವರ್ಧೆಯಲ್ಲಿ ಭಾಗವಹಿಸಿದ ಅಧಿಕಾರಿ ಮತ್ತು ಸಿಬ್ಬಂದಿರವರುಗಳಿಗೆ ಪದಕದೊಂದಿಗೆ ತಲಾ ರೂ.365/- ಗಳ ನಗದು ಬಹುಮಾನವನ್ನು
ನೀಡಿರುತ್ತಾರೆ. ಈ ಬಗ್ಗೆ ಬಹುಮಾನ
ಪಡೆದ ಸಿಬ್ಬಂದಿಯವರನ್ನು ಮಂಡ್ಯ ಜಿಲ್ಲಾ ಪೊಲೀಸ್
ವರಿಷ್ಟಾಧಿಕಾರಿಗಳು ಪ್ರಶಂಸಿರುತ್ತಾರೆ.
ಬಹುಮಾನವನ್ನು ಪಡೆದ ಅಧಿಕಾರಿ/ ಸಿಬ್ಬಂದಿರವರುಗಳ ವಿವರಃ-
ಕ್ರ.ಸಂ ಹೆಸರು ಪದನಾಮ
1. ರುಕ್ಮಾಂಗದ, ಎಆರ್ಎಸ್ಐ
2. ರಮೇಶ್ ಡಿ, ಎಆರ್ಎಸ್ಐ
3. ಮಹೇಶ ಕೆ.ಎಂ., ಎಹೆಚ್ಸಿ-06
4. ಶಿವಣ್ಣ, ಎಹೆಚ್ಸಿ-87
5. ಸಿದ್ದಶೆಟ್ಟಿ, ಎಹೆಚ್ಸಿ-102
6. ಗುರುರಾಜು, ಎಹೆಚ್ಸಿ-109
7. ಬೀರೇಶ, ಎಪಿಸಿ-67
8. ಶಿವಕುಮಾರ್, ಎಪಿಸಿ-174
9. ಕೃಷ್ಣ ಹೆಚ್.ಜಿ., ಎಪಿಸಿ-169
10. ಚಂದನ್ಕುಮಾರ್, ಎಪಿಸಿ-270
11. ಚಂದ್ರು ಸಿ.ಎಂ., ಎಪಿಸಿ-275
12. ನಂದೀಶ್, ಎಪಿಸಿ-277
Press Note 20-08-2017
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಛೇರಿ,
ಮಂಡ್ಯ ಜಿಲ್ಲೆ, ಮಂಡ್ಯ ದಿನಾಂಕ: 20-08-2017
-:ಪತ್ರಿಕಾ ಪ್ರಕಟಣೆ:-
ದಿಃ19/08/2017 ರಂದು ಸಂಜೆ ಶ್ರೀರಂಗಪಟ್ಟಣ ತಾಲ್ಲೂಕು ನಗುವನಹಳ್ಳಿ ಗೇಟ್ ಬಳಿ ಬೆಂಗಳೂರು-ಮೈಸೂರು ರಾಜ್ಯ ಹೆದ್ದಾರಿ ಪಕ್ಕದ ಪಾಲಹಳ್ಳಿಯ ರಜತ ಎಂಬುವರು ‘ಮಾರ್ಗಡಾಬ’ ಹೋಟೆಲು ಮತ್ತು ಇದಕ್ಕೆ ಹೊಂದಿಕೊಂಡಿರುವ ರೂಮುಗಳನ್ನು ಇಟ್ಟುಕೊಂಡು ಅನೈತಿಕ ವ್ಯವಹರಣೆ ನಡೆಸುತಿದ್ದು, ಇವರ ಡಾಬಗೆ ಹೊಂದಿಕೊಂಡಿರುವ ರೂಮುಗಳಲ್ಲಿ ಮಹಿಳೆಯರನ್ನು ಇಟ್ಟುಕೊಂಡು ವೇಶ್ಯವಾಟಿಕೆ ನಡೆಸುತ್ತಿದ್ದಾರೆಂದು ದೊರೆತ ಮಾಹಿತಿಯಂತೆ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಸಮೇತ ದಾಳಿ ಮಾಡಿ ಪಂಚರ ಸಮಕ್ಷಮ ಪರಿಶೀಲಿಸಲು ಹೋದಾಗ, ಡಾಬಾ ಉಸ್ತುವಾರಿ ನೋಡಿಕೊಳ್ಳುತಿದ್ದವರು ಡಾಬಾ ಹೋಟೆಲಿಗೆ ಹೊಂದಿಕೊಂಡಿರುವ ರೂಮುಗಳ ಬಾಗಿಲುಗಳನ್ನು ಹಾಕಿಕೊಂಡಿದ್ದು, ನಂತರ ವಿಚಾರ ಮಾಡಿ ಬಾಗಿಲು ತೆರೆಸಿ ನೋಡಿದಾಗ ಡಾಬ ನೋಡಿಕೊಳ್ಳುವವರಲ್ಲದೆ ಒಟ್ಟು 19 ಜನ ಪುರಷ ವ್ಯಕ್ತಿಗಳನ್ನು ದಸ್ತಗಿರಿ ಮಾಡಲಾಗಿದೆ. ಇವರು ವೇಶ್ಯವಾಟಿಕೆಯಲ್ಲಿ ತೊಡಗಿದ್ದರೆಂದು ಕಂಡು ಬಂದಿದ್ದು, ಪರಿಶೀಲಿಸಿದಾಗ ರೂಮುಗಳಲ್ಲಿ ಯಾವ ಮಹಿಳೆಯರು ಇರಲಿಲ್ಲದ ಕಾರಣ ಅನುಮಾನ ಬಂದು ಪರಿಶೀಲಿಸಿದ ಕಾಲದಲ್ಲಿ, ರೂಮಿನ ಗೋಡೆಗೆ ಅಂಟಿಸಿದಂತೆ ಇದ್ದ ಗೋಡೆಯ ಟೈಲ್ಸ್ಗಳನ್ನು ತೆರವುಗೊಳಿಸಿ ನೋಡಿದಾಗ ಸಂದಿಯೊಳಗೆ ಕೊಠಡಿಯೊಂದು ಇದ್ದು ಅದರೊಳಗೆ 7 ಜನ ಮಹಿಳೆಯರು ಬಚ್ಚಿಟ್ಟುಕೊಂಡಿದ್ದುದು ತಿಳಿದು ಬಂದಿರುತ್ತದೆ. ವೇಶ್ಯವಾಟಿಕೆ ನಡೆಸುತಿದ್ದ ವ್ಯಕ್ತಿಗಳು ಪೊಲೀಸರು ದಾಳಿ ಮಾಡಿದ ಕಾಲದಲ್ಲಿ ಮಹಿಳೆಯರನ್ನು ಬಚ್ಚಿಟ್ಟುಕೊಳ್ಳಲು ಗುಹೆಯಂತಹ ಕೊಠಡಿಯನ್ನು ಪೂರ್ವಯೋಜಿತವಾಗಿ ನಿರ್ಮಿಸಿಕೊಂಡು, ದಾಳಿಮಾಡಿದವರಿಗೆ ಗೋಡೆ ಎಂದು ತಿಳಿದುಕೊಳ್ಳಲು ಮರೆಮಾಚಿರುವುದು ಕಂಡು ಬಂದಿರುತ್ತದೆ. ದಾಳಿ ಕಾಲದಲ್ಲಿ ಒಟ್ಟು 7 ಜನ ಮಹಿಳೆಯರನ್ನು ರಕ್ಷಣೆ ಮಾಡಿದ್ದು ನಿಯಮಾನುಸಾರ ಅವರುಗಳನ್ನು ವಾರಸುದಾರರು ಬಂದು ಕರೆದುಕೊಂಡು ಹೋಗುವವರೆಗೆ ಮಹಿಳಾ ಶಾಂತ್ವಾನ ಕೇಂದ್ರಕ್ಕೆ ಬಿಡಲಾಗುತ್ತಿದೆ.
‘ಮಾರ್ಗ ಡಾಬ’ ದ ರೂಮುಗಳಿಗೆ ಸಂತೋಷ ಎಂ. @ ಸಂದೇಶ ಬನ್ನಿಮಂಟಪ ಮೈಸೂರು, ನಂದಕುಮಾರ್ ಹೆಚ್.ಡಿ. @ ನಂದನ್ ಹುಚ್ಚೇಗೌಡನದೊಡ್ಡಿ ಗ್ರಾಮ ಮಳವಳ್ಳಿ ತಾಲ್ಲೂಕು, ನಾಗೇಶ ನಾಗಮಂಗಲ ಟೌನ್ ಮತ್ತು ಕಿರಣ ಎಂಬುವರು ಮಹಿಳೆಯರನ್ನು ವೇಶ್ಯವಾಟಿಕೆ ಉದ್ದೇಶಕ್ಕಾಗಿ ಕರೆತರುತಿದ್ದರೆಂದು ತಿಳಿದು ಬಂದಿರುತ್ತದೆ. ಜಗದೀಶ ಉತ್ತರಕನ್ನಡ ಜಿಲೆ,್ಲ ದರ್ಶನ ಕೆ.ಎನ್. ಕದಬಳ್ಳಿ ಗ್ರಾಮ ನಾಗಮಂಗಲ ತಾಲ್ಲೂಕು. ಭರತೇಶ ಹೆಚ್.ಸಿ. ಹೊನ್ನಶೆಟ್ಟಹಳ್ಳಿ ಗ್ರಾಮ ಚನ್ನರಾಯಪಟ್ಟಣ ತಾಲ್ಲೂಕು, ಮಣಿ @ ತಿಪ್ಪೇಶ ಹೊಸಹಳ್ಳಿ ಗ್ರಾಮ ದಾವಣಗೆರೆ ತಾಲ್ಲೂಕು, ಹುಲಿಗಪ್ಪ ಮಲ್ಲಪ್ಪ ನರಗುಂದ ಸುರುಕೋಡು ಗ್ರಾಮ ನರಗುಂದ ತಾಲ್ಲೂಕು ರವರುಗಳು ಡಾಬ ರೂಮುಗಳ ಉಸ್ತುವಾರಿ ನೋಡಿಕೊಂಡು ಗುಹೆಯಂತಹ ಕೊಠಡಿಯಲ್ಲಿ ಮಹಿಳೆಯರನ್ನು ಇಟ್ಟುಕೊಂಡು ವೇಶ್ಯವಾಟಿಕೆ ನಡೆಸಿ ಹಣ ಸಂಪಾದಿಸಿ ಮಾಲೀಕರು ಸೇರಿದಂತೆ ಎಲ್ಲರೂ ಹಂಚಿಕೊಂಡು ಜೀವನ ನಡುಸುತಿದ್ದರೆಂದು ಕಂಡು ಬಂದಿದೆ. ಈ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಗಿರಾಕಿಗಳಾದ ಸುರೇಶ, ಮಹಮದ್ ಬಸೀರ್, ಜೆಸಿಲ್ ಟಿ.ಕೆ ಷಹಾಹನ್, ಹರೀಶ ಕುಮಾರ್ ಕೇರಳ ರಾಜ್ಯರವರಾಗಿದ್ದು ಮಿತೀಶ್ ರಂಜನ್ ಜಾರ್ಖಂಡ್ ರಾಜ್ಯ, ನಾಗರಾಜು ತುಮಕೂರು ಜಿಲ್ಲೆ, ಮೆಹಬೂಬ್ ಪಾಷ, ರಾಯಿಲ್ ಖಾನ್, ಸೈಯದ್ ಮುಜಾಹಿಲ್, ಖಾದಿರ್ ಖಾನ್ ಮೈಸೂರು ನಗರದವರಾಗಿರುತ್ತಾರೆ.
ಪಾಲಹಳ್ಳಿ ಗ್ರಾಮದ ಪಿ.ವಿ.ಶೇಷಪ್ಪ ರವರು ಇದಕ್ಕಾಗಿ ‘ಟೂರಿಸ್ಟ್ ಹೋಂ’ ಎಂಬ ಹೆಸರಿನಲ್ಲಿ ತಮ್ಮ ಜಮೀನಿನಲ್ಲಿ ರೂಮುಗಳನ್ನು ನಿರ್ಮಿಸಿ, ಮೈಸೂರು ಸಿಟಿ ಟೀಚರ್ಸ್ ಬಡಾವಣೆಯ ಸಿ.ಎಸ್.ಮನು ಎಂಬುವರು ಬಾಡಿಗೆ ಕರಾರು ಮಾಡಿಕೊಂಡು ಇವರೆಲ್ಲರೂ ತಿಳಿದು ತಿಳಿದೇ ಕಾನೂನು ಬಾಹಿರವಾಗಿ ವೇಶ್ಯವಾಟಿಕೆ ಚಟುವಟಿಗೆ ನಡೆಸಿ ಸಂಪಾದಿಸಿದ ಹಣವನ್ನು ಹಂಚಿಕೊಂಡು ವ್ಯವಹಾರ ನಡೆಸುತಿದ್ದರೆಂದು ಕಂಡು ಬಂದಿರುತ್ತದೆ ಹಾಗೂ ತಲೆ ಮರೆಸಿಕೊಂಡಿರುತ್ತಾನೆ.
ದಾಳಿ ಮಾಡಿದ ಕಾಲದಲ್ಲಿ ವೇಶ್ಯವಾಟಿಕೆ ಉದ್ದೇಶಕ್ಕಾಗಿ ಇಟ್ಟುಕೊಂಡಿದ್ದ ಒಟ್ಟು ನಗದು 50345/- ರೂ ನಗದು, 17 ಮೊಬೈಲ್ ಪೋನುಗಳು, 1 ಚವರ್ಲೆಟ್ ತವೆರಾ ಕಾರು, 4 ಮೊಟಾರು ಬೈಕುಗಳು, ಸ್ಥಳದಲ್ಲಿ ದೊರೆತ ಹಲವಾರು ಕಾಂಡೂಮ್ಸ್ ಪ್ಯಾಕೆಟುಗಳನ್ನು ವಶಪಡಿಸಿಕೊಂಡು ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗುತ್ತಿದೆ. ಮುಖ್ಯ ಆರೋಪಿ ಪಾಲಹಳ್ಳಿ ರಜತ ಮತ್ತು ಕಿರಣ್ ತಲೆಮರೆಸಿಕೊಂಡಿರುತ್ತಾರೆ.
ಸದರಿ ದಾಳಿಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿರವರಾದ ಶ್ರೀಮತಿ ರಾಧಿಕ, ಐ.ಪಿ.ಎಸ್., ಅಡಿಷನಲ್ ಎಸ್.ಪಿ., ಶ್ರೀಮತಿ ಲಾವಣ್ಯ.ಬಿ.ಎನ್.,ಕೆ.ಎಸ್.ಪಿ.ಎಸ್., ರವರ ಮಾರ್ಗದರ್ಶನದಲ್ಲಿ ಶ್ರೀರಂಗಪಟ್ಟಣ ಆರಕ್ಷಕ ಉಪಾಧೀಕ್ಷಕರಾದ ಶ್ರೀ ವಿಶ್ವನಾಥ್ ರವರು ಪಿಎಸ್ಐ ಶ್ರೀರಂಗಪಟ್ಟಣ ಟೌನ್, ಗ್ರಾಮಾಂತರ, ಕೆ.ಆರ್.ಸಾಗರ ಮತ್ತು ವಿಶೇಷವಾಗಿ ಮಹಿಳಾ ಪಿಎಸ್ಐ ಅರಕೆರೆ ಠಾಣೆ ಹಾಗೂ ಸಿಬ್ಬಂದಿಗಳು ಬಾಗಿಯಾಗಿ ಮರೆಮಾಚಲು ಗುಹೆಯಂತಹ ಕೊಠಡಿಯಲ್ಲಿದ್ದ ಮಹಿಳೆಯರನ್ನು ಪತ್ತೆ ಮಾಡಿ ರಕ್ಷಿಸಿ ಆರೋಪಿಗಳನ್ನು ದಸ್ತಗಿರಿ ಮಾಡಿರುತ್ತಾರೆ.
ಮಂಡ್ಯ ಜಿಲ್ಲೆ, ಮಂಡ್ಯ ದಿನಾಂಕ: 20-08-2017
-:ಪತ್ರಿಕಾ ಪ್ರಕಟಣೆ:-
ದಿಃ19/08/2017 ರಂದು ಸಂಜೆ ಶ್ರೀರಂಗಪಟ್ಟಣ ತಾಲ್ಲೂಕು ನಗುವನಹಳ್ಳಿ ಗೇಟ್ ಬಳಿ ಬೆಂಗಳೂರು-ಮೈಸೂರು ರಾಜ್ಯ ಹೆದ್ದಾರಿ ಪಕ್ಕದ ಪಾಲಹಳ್ಳಿಯ ರಜತ ಎಂಬುವರು ‘ಮಾರ್ಗಡಾಬ’ ಹೋಟೆಲು ಮತ್ತು ಇದಕ್ಕೆ ಹೊಂದಿಕೊಂಡಿರುವ ರೂಮುಗಳನ್ನು ಇಟ್ಟುಕೊಂಡು ಅನೈತಿಕ ವ್ಯವಹರಣೆ ನಡೆಸುತಿದ್ದು, ಇವರ ಡಾಬಗೆ ಹೊಂದಿಕೊಂಡಿರುವ ರೂಮುಗಳಲ್ಲಿ ಮಹಿಳೆಯರನ್ನು ಇಟ್ಟುಕೊಂಡು ವೇಶ್ಯವಾಟಿಕೆ ನಡೆಸುತ್ತಿದ್ದಾರೆಂದು ದೊರೆತ ಮಾಹಿತಿಯಂತೆ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಸಮೇತ ದಾಳಿ ಮಾಡಿ ಪಂಚರ ಸಮಕ್ಷಮ ಪರಿಶೀಲಿಸಲು ಹೋದಾಗ, ಡಾಬಾ ಉಸ್ತುವಾರಿ ನೋಡಿಕೊಳ್ಳುತಿದ್ದವರು ಡಾಬಾ ಹೋಟೆಲಿಗೆ ಹೊಂದಿಕೊಂಡಿರುವ ರೂಮುಗಳ ಬಾಗಿಲುಗಳನ್ನು ಹಾಕಿಕೊಂಡಿದ್ದು, ನಂತರ ವಿಚಾರ ಮಾಡಿ ಬಾಗಿಲು ತೆರೆಸಿ ನೋಡಿದಾಗ ಡಾಬ ನೋಡಿಕೊಳ್ಳುವವರಲ್ಲದೆ ಒಟ್ಟು 19 ಜನ ಪುರಷ ವ್ಯಕ್ತಿಗಳನ್ನು ದಸ್ತಗಿರಿ ಮಾಡಲಾಗಿದೆ. ಇವರು ವೇಶ್ಯವಾಟಿಕೆಯಲ್ಲಿ ತೊಡಗಿದ್ದರೆಂದು ಕಂಡು ಬಂದಿದ್ದು, ಪರಿಶೀಲಿಸಿದಾಗ ರೂಮುಗಳಲ್ಲಿ ಯಾವ ಮಹಿಳೆಯರು ಇರಲಿಲ್ಲದ ಕಾರಣ ಅನುಮಾನ ಬಂದು ಪರಿಶೀಲಿಸಿದ ಕಾಲದಲ್ಲಿ, ರೂಮಿನ ಗೋಡೆಗೆ ಅಂಟಿಸಿದಂತೆ ಇದ್ದ ಗೋಡೆಯ ಟೈಲ್ಸ್ಗಳನ್ನು ತೆರವುಗೊಳಿಸಿ ನೋಡಿದಾಗ ಸಂದಿಯೊಳಗೆ ಕೊಠಡಿಯೊಂದು ಇದ್ದು ಅದರೊಳಗೆ 7 ಜನ ಮಹಿಳೆಯರು ಬಚ್ಚಿಟ್ಟುಕೊಂಡಿದ್ದುದು ತಿಳಿದು ಬಂದಿರುತ್ತದೆ. ವೇಶ್ಯವಾಟಿಕೆ ನಡೆಸುತಿದ್ದ ವ್ಯಕ್ತಿಗಳು ಪೊಲೀಸರು ದಾಳಿ ಮಾಡಿದ ಕಾಲದಲ್ಲಿ ಮಹಿಳೆಯರನ್ನು ಬಚ್ಚಿಟ್ಟುಕೊಳ್ಳಲು ಗುಹೆಯಂತಹ ಕೊಠಡಿಯನ್ನು ಪೂರ್ವಯೋಜಿತವಾಗಿ ನಿರ್ಮಿಸಿಕೊಂಡು, ದಾಳಿಮಾಡಿದವರಿಗೆ ಗೋಡೆ ಎಂದು ತಿಳಿದುಕೊಳ್ಳಲು ಮರೆಮಾಚಿರುವುದು ಕಂಡು ಬಂದಿರುತ್ತದೆ. ದಾಳಿ ಕಾಲದಲ್ಲಿ ಒಟ್ಟು 7 ಜನ ಮಹಿಳೆಯರನ್ನು ರಕ್ಷಣೆ ಮಾಡಿದ್ದು ನಿಯಮಾನುಸಾರ ಅವರುಗಳನ್ನು ವಾರಸುದಾರರು ಬಂದು ಕರೆದುಕೊಂಡು ಹೋಗುವವರೆಗೆ ಮಹಿಳಾ ಶಾಂತ್ವಾನ ಕೇಂದ್ರಕ್ಕೆ ಬಿಡಲಾಗುತ್ತಿದೆ.
‘ಮಾರ್ಗ ಡಾಬ’ ದ ರೂಮುಗಳಿಗೆ ಸಂತೋಷ ಎಂ. @ ಸಂದೇಶ ಬನ್ನಿಮಂಟಪ ಮೈಸೂರು, ನಂದಕುಮಾರ್ ಹೆಚ್.ಡಿ. @ ನಂದನ್ ಹುಚ್ಚೇಗೌಡನದೊಡ್ಡಿ ಗ್ರಾಮ ಮಳವಳ್ಳಿ ತಾಲ್ಲೂಕು, ನಾಗೇಶ ನಾಗಮಂಗಲ ಟೌನ್ ಮತ್ತು ಕಿರಣ ಎಂಬುವರು ಮಹಿಳೆಯರನ್ನು ವೇಶ್ಯವಾಟಿಕೆ ಉದ್ದೇಶಕ್ಕಾಗಿ ಕರೆತರುತಿದ್ದರೆಂದು ತಿಳಿದು ಬಂದಿರುತ್ತದೆ. ಜಗದೀಶ ಉತ್ತರಕನ್ನಡ ಜಿಲೆ,್ಲ ದರ್ಶನ ಕೆ.ಎನ್. ಕದಬಳ್ಳಿ ಗ್ರಾಮ ನಾಗಮಂಗಲ ತಾಲ್ಲೂಕು. ಭರತೇಶ ಹೆಚ್.ಸಿ. ಹೊನ್ನಶೆಟ್ಟಹಳ್ಳಿ ಗ್ರಾಮ ಚನ್ನರಾಯಪಟ್ಟಣ ತಾಲ್ಲೂಕು, ಮಣಿ @ ತಿಪ್ಪೇಶ ಹೊಸಹಳ್ಳಿ ಗ್ರಾಮ ದಾವಣಗೆರೆ ತಾಲ್ಲೂಕು, ಹುಲಿಗಪ್ಪ ಮಲ್ಲಪ್ಪ ನರಗುಂದ ಸುರುಕೋಡು ಗ್ರಾಮ ನರಗುಂದ ತಾಲ್ಲೂಕು ರವರುಗಳು ಡಾಬ ರೂಮುಗಳ ಉಸ್ತುವಾರಿ ನೋಡಿಕೊಂಡು ಗುಹೆಯಂತಹ ಕೊಠಡಿಯಲ್ಲಿ ಮಹಿಳೆಯರನ್ನು ಇಟ್ಟುಕೊಂಡು ವೇಶ್ಯವಾಟಿಕೆ ನಡೆಸಿ ಹಣ ಸಂಪಾದಿಸಿ ಮಾಲೀಕರು ಸೇರಿದಂತೆ ಎಲ್ಲರೂ ಹಂಚಿಕೊಂಡು ಜೀವನ ನಡುಸುತಿದ್ದರೆಂದು ಕಂಡು ಬಂದಿದೆ. ಈ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಗಿರಾಕಿಗಳಾದ ಸುರೇಶ, ಮಹಮದ್ ಬಸೀರ್, ಜೆಸಿಲ್ ಟಿ.ಕೆ ಷಹಾಹನ್, ಹರೀಶ ಕುಮಾರ್ ಕೇರಳ ರಾಜ್ಯರವರಾಗಿದ್ದು ಮಿತೀಶ್ ರಂಜನ್ ಜಾರ್ಖಂಡ್ ರಾಜ್ಯ, ನಾಗರಾಜು ತುಮಕೂರು ಜಿಲ್ಲೆ, ಮೆಹಬೂಬ್ ಪಾಷ, ರಾಯಿಲ್ ಖಾನ್, ಸೈಯದ್ ಮುಜಾಹಿಲ್, ಖಾದಿರ್ ಖಾನ್ ಮೈಸೂರು ನಗರದವರಾಗಿರುತ್ತಾರೆ.
ಪಾಲಹಳ್ಳಿ ಗ್ರಾಮದ ಪಿ.ವಿ.ಶೇಷಪ್ಪ ರವರು ಇದಕ್ಕಾಗಿ ‘ಟೂರಿಸ್ಟ್ ಹೋಂ’ ಎಂಬ ಹೆಸರಿನಲ್ಲಿ ತಮ್ಮ ಜಮೀನಿನಲ್ಲಿ ರೂಮುಗಳನ್ನು ನಿರ್ಮಿಸಿ, ಮೈಸೂರು ಸಿಟಿ ಟೀಚರ್ಸ್ ಬಡಾವಣೆಯ ಸಿ.ಎಸ್.ಮನು ಎಂಬುವರು ಬಾಡಿಗೆ ಕರಾರು ಮಾಡಿಕೊಂಡು ಇವರೆಲ್ಲರೂ ತಿಳಿದು ತಿಳಿದೇ ಕಾನೂನು ಬಾಹಿರವಾಗಿ ವೇಶ್ಯವಾಟಿಕೆ ಚಟುವಟಿಗೆ ನಡೆಸಿ ಸಂಪಾದಿಸಿದ ಹಣವನ್ನು ಹಂಚಿಕೊಂಡು ವ್ಯವಹಾರ ನಡೆಸುತಿದ್ದರೆಂದು ಕಂಡು ಬಂದಿರುತ್ತದೆ ಹಾಗೂ ತಲೆ ಮರೆಸಿಕೊಂಡಿರುತ್ತಾನೆ.
ದಾಳಿ ಮಾಡಿದ ಕಾಲದಲ್ಲಿ ವೇಶ್ಯವಾಟಿಕೆ ಉದ್ದೇಶಕ್ಕಾಗಿ ಇಟ್ಟುಕೊಂಡಿದ್ದ ಒಟ್ಟು ನಗದು 50345/- ರೂ ನಗದು, 17 ಮೊಬೈಲ್ ಪೋನುಗಳು, 1 ಚವರ್ಲೆಟ್ ತವೆರಾ ಕಾರು, 4 ಮೊಟಾರು ಬೈಕುಗಳು, ಸ್ಥಳದಲ್ಲಿ ದೊರೆತ ಹಲವಾರು ಕಾಂಡೂಮ್ಸ್ ಪ್ಯಾಕೆಟುಗಳನ್ನು ವಶಪಡಿಸಿಕೊಂಡು ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗುತ್ತಿದೆ. ಮುಖ್ಯ ಆರೋಪಿ ಪಾಲಹಳ್ಳಿ ರಜತ ಮತ್ತು ಕಿರಣ್ ತಲೆಮರೆಸಿಕೊಂಡಿರುತ್ತಾರೆ.
ಸದರಿ ದಾಳಿಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿರವರಾದ ಶ್ರೀಮತಿ ರಾಧಿಕ, ಐ.ಪಿ.ಎಸ್., ಅಡಿಷನಲ್ ಎಸ್.ಪಿ., ಶ್ರೀಮತಿ ಲಾವಣ್ಯ.ಬಿ.ಎನ್.,ಕೆ.ಎಸ್.ಪಿ.ಎಸ್., ರವರ ಮಾರ್ಗದರ್ಶನದಲ್ಲಿ ಶ್ರೀರಂಗಪಟ್ಟಣ ಆರಕ್ಷಕ ಉಪಾಧೀಕ್ಷಕರಾದ ಶ್ರೀ ವಿಶ್ವನಾಥ್ ರವರು ಪಿಎಸ್ಐ ಶ್ರೀರಂಗಪಟ್ಟಣ ಟೌನ್, ಗ್ರಾಮಾಂತರ, ಕೆ.ಆರ್.ಸಾಗರ ಮತ್ತು ವಿಶೇಷವಾಗಿ ಮಹಿಳಾ ಪಿಎಸ್ಐ ಅರಕೆರೆ ಠಾಣೆ ಹಾಗೂ ಸಿಬ್ಬಂದಿಗಳು ಬಾಗಿಯಾಗಿ ಮರೆಮಾಚಲು ಗುಹೆಯಂತಹ ಕೊಠಡಿಯಲ್ಲಿದ್ದ ಮಹಿಳೆಯರನ್ನು ಪತ್ತೆ ಮಾಡಿ ರಕ್ಷಿಸಿ ಆರೋಪಿಗಳನ್ನು ದಸ್ತಗಿರಿ ಮಾಡಿರುತ್ತಾರೆ.
Press Note - Srirangapatana Rural PS Murder Case Detected
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಛೇರಿ,
ಮಂಡ್ಯ ಜಿಲ್ಲೆ, ಮಂಡ್ಯ ದಿನಾಂಕ: 09-08-2017
ಮಂಡ್ಯ ಜಿಲ್ಲೆ, ಮಂಡ್ಯ ದಿನಾಂಕ: 09-08-2017
ಪತ್ರಿಕಾ ಪ್ರಕಟಣೆ
ದಿಃ03/08/2017 ರಂದು ಮುಂಜಾನೆ ಪಾಂಡವಪುರ ತಾಲ್ಲೂಕು ಕೆ.ಬೆಟ್ಟಹಳ್ಳಿ ಬಳಿ ಚಾಗಶೆಟ್ಟಹಳ್ಳಿ ಗ್ರಾಮದ ಕಡೆಯ ರಸ್ತೆಯಲ್ಲಿ ದೊರೆತ ಮಹಿಳಾ ಶವವು ಕೆ.ಬೆಟ್ಟಹಳ್ಳಿ ಗ್ರಾಮದ ರಘು ಎಂಬುವರ ಹೆಂಡತಿ 38 ವರ್ಷದ ಮಮತ ರವರ ಶವ ದೊರೆತಿದ್ದು, ಈಕೆಯು ದಿಃ02/08/2017 ರಂದು ರಾತ್ರಿ 8.30 ಗಂಟೆಯಲ್ಲಿ ಮನೆಯಿಂದ ಹೋಗಿದ್ದು ಈಕೆಯನ್ನು ಯಾರೋ, ಯಾವುದೋ ರೀತಿಯಲ್ಲಿ ಕೊಲೆ ಮಾಡಿ ರುವ ಬಗ್ಗೆ ಅನುಮಾನ ಇರುವುದಾಗಿ ಮೃತಳ ಮಗ ಸಂಧೀಪ ನೀಡಿದ ದೂರಿನಂತೆ ಕೊಲೆ ಪ್ರಕರಣ ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮೊ.ನಂ.240/2017 ಕಲಂ 302, 201 ಐಪಿಸಿ ವರದಿಯಾಗಿತ್ತು.
ಮೃತಳು ಹಾಗೂ ಹಾರೋಹಳ್ಳಿ ಗ್ರಾಮದ ಗಾರೆಕೆಲಸದ ಕೃಷ್ಣನಿಗೆ ಸಂಬಂಧಿಸಿದಂತೆ ತಳಮಟ್ಟದಿಂದ ಮಾಹಿತಿಯನ್ನು ಸಂಗ್ರಹಿಸಿ ತಲೆಮರೆಸಿಕೊಂಡಿದ್ದ ಹಾರೋಹಳ್ಳಿ ಗ್ರಾಮದ ಕೃಷ್ಣನನ್ನು ದಿಃ07/08/2017 ರಂದು ಮುಂಜಾನೆ ಪಾಂಡವಪುರದಲ್ಲಿ ತನಿಖಾಧಿಕಾರಿಗಳು ಪತ್ತೆ ಮಾಡಿ ತನಿಖೆ ನಡೆಸಿದಾಗ, ಕೃಷ್ಣ ಹಾರೋಹಳ್ಳಿ ಗ್ರಾಮ ಈತನು ಮೃತೆ ಮಮತಳೊಂದಿಗೆ 12 ವರ್ಷಗಳಿಂದ ಪರಿಚಯ ಇಟ್ಟುಕೊಂಡಿದ್ದು, ತನ್ನೊಂದಿಗೆ ಗಾರೆಕೆಲಸಕ್ಕೆ ಕರೆದುಕೊಂಡು ಹೋಗುತಿದ್ದು ಇತ್ತೀಚೆಗೆ ಈಕೆ ತನಗಿಂತ ಬೇರೆಯವರನ್ನು ಪರಿಚಯ ಮಾಡಿಕೊಂಡು ಅವರೊಂದಿಗೆ ಅಕ್ರಮ ಸಂಬಂದ ಇಟ್ಟುಕೊಂಡಿರಬಹುದೆಂಬ ದ್ವೇಷವನ್ನು ಹೊಂದಿ, ಕೊಲೆ ಮಾಡುವ ಉದ್ದೇಶದಿಂದ ದಿಃ02/08/2017 ರಂದು ರಾತ್ರಿ ಆಕೆಯನ್ನು ಹಾರೋಹಳ್ಳಿಯ ರಾಮಕೃಷ್ಣೆಗೌಡರ ಬೋರೆಹೊಲದ ಬಳಿ ಹೇಮಾವತಿ ಪಾಳು ಸೀಳು ನಾಲೆಯ ಬಳಿಗೆ ಕರೆದುಕೊಂಡು ಹೋಗಿ ಆಕೆಗೆ ಮದ್ಯಪಾನ ಮಾಡಿಸಿ, ಆಕೆಯ ಕುತ್ತಿಗೆಗೆ ಟವಲಿನಿಂದ ಬಿಗಿದು ಉಸಿರುಗಟ್ಟಿಸಿ ಕೊಲೆ ಮಾಡಿ, ಈ ಅಪರಾದ ತನ್ನ ಮೇಲೆ ಬರದಂತೆ ಮುಚ್ಚಿಹಾಕಿ ಸಾಕ್ಷಿ ನಾಶಗೊಳಿಸುವ ಉದ್ದೇಶದಿಂದ ಶವವನ್ನು ಅದೇ ರಾತ್ರಿ ಕೆ.ಬೆಟ್ಟಹಳ್ಳಿಯ ಬಳಿಗೆ ಬೈಕಿನಲ್ಲಿ ಸಾಗಿಸಿ, ಆಕೆಯೇ ವಿಷ ಕುಡಿದು ಸತ್ತಿರುತ್ತಾಳೆಂದು ಭಾವಿಸಿಕೊಳ್ಳಲೆಂದು, ಹೆಣದ ಬಳಿಗೆ ಹೈಡ್ರೋಜನ್ ಪೆರಾಕ್ಸ್ಡ್ ಖಾಲಿ ಡಬ್ಬಿಯನ್ನು ಇಟ್ಟು ಹೊರಟು ಹೋಗಿದುದು ತನಿಖೆಯಿಂದ ತಿಳಿದು ಬಂದಿರುತ್ತದೆ
ಸದರಿ ಪ್ರಕರಣವನ್ನು ಡಿ.ಎಸ್.ಪಿ. ಶ್ರೀ. ವಿಶ್ವನಾಥ್ರವರ ಮಾರ್ಗದರ್ಶನದಲ್ಲಿ ತನಿಖಾಧಿಕಾರಿ ಶ್ರೀರಂಗಪಟ್ಟಣ ವೃತ್ತ ನಿರೀಕ್ಷಕರಾದ ಶ್ರೀ.ಎಂ.ಚಂದ್ರಶೇಖರ್, ಯೋಗಾಂಜನಪ್ಪ, ಪಿ.ಎಸ್.ಐ,. ಶ್ರೀರಂಗಪಟ್ಟಣ ಟೌನ್, ಪಿಎಸ್ಐ ಬ್ಯಾಟರಾಯಗೌಡ, ಹಾಗೂ ಸಿಬ್ಬಂದಿಯವರಾದ ವಿಜಯ್ಕುಮಾರ್, ಕೆ.ಕುಮಾರ, ವರದರಾಜ, ರವೀಶ.ಎಸ್.ಇವರುಗಳು ಪ್ರಕರಣವನ್ನು ಪತ್ತೆ ಮಾಡಿ ಆರೋಪಿಯನ್ನು ದಸ್ತಗಿರಿ ಮಾಡಲು ಶ್ರಮಿಸಿರುತ್ತಾರೆ. ಸದರಿ ಪ್ರಕರಣದ ಪತ್ತೆ ಕಾರ್ಯದಲ್ಲಿ ಶ್ರಮಿಸಿದ ಇವರೆಲ್ಲರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಮಂಡ್ಯ ಜಿಲ್ಲೆರವರು ಪ್ರಶಂಶಿಸಿರುತ್ತಾರೆ.
Subscribe to:
Posts (Atom)
























